LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಗಸ್ಟ್ 29 ರಂದು ಹಸೆಮಣೆ ಏರಲಿದ್ದಾರೆ ನಟ ಚಿಕ್ಕಣ್ಣ

Advertisement
Advertisement

ಸ್ಯಾಂಡಲ್‌ವುಡ್‌ನ ಖ್ಯಾತ ಹಾಸ್ಯ ನಟ ಚಿಕ್ಕಣ್ಣ ಸದ್ದಿಲ್ಲದೆ ವೈವಾಹಿಕ ಜೀವನಕ್ಕೆ  ಕಾಲಿಡಲು ಸಜ್ಜಾಗಿದ್ದಾರೆ. ಮಂಡ್ಯ ಮೂಲದ ಪಾವನಾ ಜೊತೆ ಚಿಕ್ಕಣ್ಣ ಅವರ ಮದುವೆ ನಿಶ್ಚಯವಾಗಿದ್ದು, ಮದುವೆ ದಿನಾಂಕವೂ ನಿಗದಿಯಾಗಿದೆ.

ಆಗಸ್ಟ್ 29 ಮತ್ತು 30 ರಂದು ಮೈಸೂರಿನ ಸ್ಪೆಕ್ಟ್ರಮ್ ಹಾಲ್‌ನಲ್ಲಿ ಅದ್ದೂರಿಯಾಗಿ ಮದುವೆ ಸಮಾರಂಭ ನಡೆಯಲಿದೆ. ಈ ಮದುವೆ ಮಹೋತ್ಸವದಲ್ಲಿ ಸ್ಯಾಂಡಲ್‌ವುಡ್‌ನ ಪ್ರಮುಖ ನಟ-ನಟಿಯರು, ತಂತ್ರಜ್ಞರು ಹಾಗೂ ಗಣ್ಯರು ಭಾಗವಹಿಸುವ ಸಾಧ್ಯತೆಯಿದೆ.

ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಪಾವನಾ ಸದ್ಯ ಚಿಕ್ಕಣ್ಣ ಅವರ ಕೈಹಿಡಿಯಲಿರುವ ವಧು. ಇಂಜಿನಿಯರಿಂಗ್ ಪದವಿ ಪಡೆದಿರುವ ಪಾವನಾ ಅವರೊಂದಿಗೆ ಚಿಕ್ಕಣ್ಣ ಹೊಸ ಜೀವನ ಆರಂಭಿಸಲಿದ್ದು ಆಗಸ್ಟ್‌ 2025 ರಲ್ಲಿ ಮದುವೆ ನಿಶ್ಚಯವಾಗಿತ್ತು. 

ಮೈಸೂರಿನ ಬಲ್ಲಹಳ್ಳಿಯಲ್ಲಿ ಜನಿಸಿದ ಚಿಕ್ಕಣ್ಣ ಅವರ ಜೀವನ ಪಯಣ ಅತ್ಯಂತ ಸ್ಪೂರ್ತಿದಾಯಕ. ಎಸ್‌ಎಸ್‌ಎಲ್‌ಸಿ ಶಿಕ್ಷಣದ ನಂತರ ಜೀವನೋಪಾಯಕ್ಕಾಗಿ ಗಾರೆ ಕೆಲಸ ಮಾಡುತ್ತಿದ್ದ ಚಿಕ್ಕಣ್ಣ ಅವರಿಗೆ, ಶಾಲಾ ದಿನಗಳಿಂದಲೇ ನಾಟಕಗಳಲ್ಲಿ ನಟಿಸುವ ಹವ್ಯಾಸವಿತ್ತು.

ಆರ್ಕೆಸ್ಟ್ರಾಗಳಲ್ಲಿ ಹಾಸ್ಯ ಪಾತ್ರಗಳನ್ನು ಮಾಡುತ್ತಾ ಕಿರುತೆರೆಗೆ ಪ್ರವೇಶಿಸಿದ ಇವರು, ನಂತರ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ನಟ ಯಶ್ ಅಭಿನಯದ ‘ಕಿರಾತಕ’ ಸಿನಿಮಾ ಚಿಕ್ಕಣ್ಣ ಅವರ ವೃತ್ತಿಜೀವನಕ್ಕೆ ದೊಡ್ಡ ಬ್ರೇಕ್ ನೀಡಿತು. ಅಲ್ಲಿಂದ ಹಿಂತಿರುಗಿ ನೋಡದ ಚಿಕ್ಕಣ್ಣ, ಕನ್ನಡದ ಬಹುತೇಕ ಎಲ್ಲಾ ಸೂಪರ್ ಸ್ಟಾರ್ ಸಿನಿಮಾಗಳಲ್ಲಿ ನಟಿಸಿ, ಕನ್ನಡಿಗರ ನೆಚ್ಚಿನ ನಟನಾಗಿ ಹೊರಹೊಮ್ಮಿದ್ದಾರೆ. ಇದೀಗ ಅವರು ನಾಯಕ ನಟನಾಗಿಯೂ ಸಡ್ಡು ಹೊಡೆಯುತ್ತಿದ್ದು, ಹೊಸ ಬಾಳಿಗೆ ಕಾಲಿಡುತ್ತಿರುವುದಕ್ಕೆ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
E20 इंधनामुळे वाहने खरंच बिघडतात का? नितीन गडकरींनी संसदेत दिलेले उत्तर काय?ಆಗಸ್ಟ್ 29 ರಂದು ಹಸೆಮಣೆ ಏರಲಿದ್ದಾರೆ ನಟ ಚಿಕ್ಕಣ್ಣಗದಗ ರೈಲು ನಿಲ್ದಾಣದಲ್ಲಿ 9 ಲಕ್ಷ ರೂ. ಮೌಲ್ಯದ 19 ಕೆಜಿ ಗಾಂಜಾ ಜಪ್ತಿಕೈಕಾಲು ಸರಿಯಿದ್ರೂ ಶೋಕಿ ಜೀವನಕ್ಕೆ ಅಂಗವಿಕಲನ ವೇಷ – ಖತರ್ನಾಕ್ ಭಿಕ್ಷುಕನ ಅಸಲಿ ಬಣ್ಣ ಬಯಲುಪರಿಸರ ಸಂಬಂಧಿ ಅನುಮತಿ ಸಿಕ್ಕರೆ 3 ತಿಂಗಳಲ್ಲಿ ವಿಜಯಪುರ ಏರ್‌ಪೋರ್ಟ್ ಕಾರ್ಯಾರಂಭ: ಎಂ.ಬಿ.ಪಾಟೀಲ್‌ಶೂಟೌಟ್‌ಗೆ ಆದೇಶ ನೀಡೋದು ಮ್ಯಾಜಿಸ್ಟ್ರೇಟ್‌ಗಳು, ಅಮಿತ್‌ ಶಾ ಅಲ್ಲ : ರಾಹುಲ್‌ಗೆ ಜಿತೇಂದ್ರ ಸಿಂಗ್‌ ತಿರುಗೇಟುಒಂದು ರಾಷ್ಟ್ರ, ಒಂದು ಚುನಾವಣೆ – ವರದಿ ಸಲ್ಲಿಕೆಗೆ ಅವಧಿ ವಿಸ್ತರಣೆಚಿಲ್ಲರೆ ಇಲ್ಲವೆಂದು ಸಚಿವರನ್ನು ಬಸ್ಸಿನಿಂದ ಕೆಳಗಿಳಿಸಿದ್ದ ನಿರ್ವಾಹಕನ ಅಮಾನತು ವಾಪಸ್ಕಾಫಿ ತೋಟದಲ್ಲಿ ಕೆಲಸದ ವೇಳೆ ಮರ ಬಿದ್ದು ಇಬ್ಬರು ಮಹಿಳೆಯರ ದುರ್ಮರಣಕೆಲಸದ ಸಮಯದಲ್ಲಿ ಪಾರ್ಟಿ – 6 ಮಂದಿ ಪಿಡಿಓಗಳು ಸಸ್ಪೆಂಡ್