LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು – ಇಂದು ಕೋರ್ಟ್‌ನಲ್ಲಿ ಭವಿಷ್ಯ!

Advertisement
Advertisement
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ  ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾದ ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತ ಆದೇಶವನ್ನು ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ  ಪ್ರಕಟಿಸಲಿದೆ.

ನ್ಯಾಯಾಲಯದ ಈ ಆದೇಶ ಆಧರಿಸಿ ಸಿದ್ದರಾಮಯ್ಯ ಅವರು ವಿಚಾರಣೆ ಎದುರಿಸಲಿದ್ದಾರೆಯೇ ಎಂಬುದು ಗೊತ್ತಾಗಲಿದೆ. ಕೋರ್ಟ್‌ ನೀಡುವ ಆದೇಶ ನೋಡಿಕೊಂಡು ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ನೀಡಿರುವ ದೂರನ್ನು ಅಭಿಯೋಜನೆಗೆ ಅನುಮತಿ ಪರಿಗಣಿಸಿ ನೀಡಬೇಕೇ ಅಥವಾ ಬೇಡವೇ ಎಂಬುದನ್ನು ರಾಜ್ಯಪಾಲರು ನಿರ್ಧರಿಸುವ ಸಾಧ್ಯತೆಯಿದೆ. ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದತ್ತ ಎಲ್ಲರ ಚಿತ್ರ ಇದೆ.

ಐದು ದಿನಗಳ ಹಿಂದೆಯಷ್ಟೇ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವರು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಮ್ಮ, ಮಲ್ಲಿಕಾರ್ಜುನ , ನಿಂಗಾ (ಜವರ) ಮತ್ತು ಇನ್ನಿತರರ ವಿರುದ್ಧ ದೂರು ದಾಖಲಾಗಿದೆ.

ದೂರುದಾರರ ಪರವಾಗಿ ವಕೀಲರಾದ ಲಕ್ಷ್ಮಿ ಐಯ್ಯಂಗಾರ್ ಅವರು ವಾದ ಮಂಡಿಸಿದ್ದರು. ಮುಡಾ ಹಗರಣದ ವಿಚಾರದಲ್ಲಿ ತಕ್ಷಣಕ್ಕೆ ಅಭಿಯೋಜನೆಯ ಅಗತ್ಯ ಇಲ್ಲ. ಅದಿಲ್ಲದೆಯೇ ಪ್ರಕರಣವನ್ನ ವಿಚಾರಣೆಗೊಳಪಡಿಸಬಹುದು ಎಂದು ವಾದ ಮಂಡಿಸಿ, ಅಯ್ಯಪ್ಪ ಮತ್ತು ಮಂಜು ಸುರಾನಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಆದೇಶವನ್ನು ಉಲ್ಲೇಖಿಸಿದರು.

 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶೂಟೌಟ್‌ಗೆ ಆದೇಶ ನೀಡೋದು ಮ್ಯಾಜಿಸ್ಟ್ರೇಟ್‌ಗಳು, ಅಮಿತ್‌ ಶಾ ಅಲ್ಲ : ರಾಹುಲ್‌ಗೆ ಜಿತೇಂದ್ರ ಸಿಂಗ್‌ ತಿರುಗೇಟುಒಂದು ರಾಷ್ಟ್ರ, ಒಂದು ಚುನಾವಣೆ – ವರದಿ ಸಲ್ಲಿಕೆಗೆ ಅವಧಿ ವಿಸ್ತರಣೆಚಿಲ್ಲರೆ ಇಲ್ಲವೆಂದು ಸಚಿವರನ್ನು ಬಸ್ಸಿನಿಂದ ಕೆಳಗಿಳಿಸಿದ್ದ ನಿರ್ವಾಹಕನ ಅಮಾನತು ವಾಪಸ್ಕಾಫಿ ತೋಟದಲ್ಲಿ ಕೆಲಸದ ವೇಳೆ ಮರ ಬಿದ್ದು ಇಬ್ಬರು ಮಹಿಳೆಯರ ದುರ್ಮರಣಕೆಲಸದ ಸಮಯದಲ್ಲಿ ಪಾರ್ಟಿ – 6 ಮಂದಿ ಪಿಡಿಓಗಳು ಸಸ್ಪೆಂಡ್ಕರ್ನಾಟಕ ಮತದಾರರ ಪಟ್ಟಿಯಿಂದ 84.31 ಲಕ್ಷ ಮಂದಿ ಔಟ್: ಚುನಾವಣಾ ಆಯೋಗಪಿಎಂ ಸೂರ್ಯಘರ್ ಯೋಜನೆಗೆ ಭಾರೀ ಸ್ಪಂದನೆ, 48 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಲಾಭ – ಪ್ರಹ್ಲಾದ್ ಜೋಶಿಸಿಎಂ ಸ್ವಕ್ಷೇತ್ರದಲ್ಲಿ ಬರ ಪರಿಶೀಲನೆ ನಡೆಸಿದ ಬಿಜೆಪಿ ನಿಯೋಗ – ಶೀಘ್ರ ಬರ ಪರಿಹಾರ ಘೋಷಣೆಗೆ ಒತ್ತಾಯಸಿಎಂ ಸ್ವಕ್ಷೇತ್ರದಲ್ಲಿ ಬರ ಪರಿಶೀಲನೆ ನಡೆಸಿದ ಬಿಜೆಪಿ ನಿಯೋಗ – ಶೀಘ್ರ ಬರ ಪರಿಹಾರ ಘೋಷಣೆಗೆ ಒತ್ತಾಯ‘ವಂದೇ ಮಾತರಂ’ಗೆ ಅವಮಾನ ಮಾಡಿದ್ರೆ 3 ವರ್ಷ ಜೈಲು – ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ